Sunday, July 23, 2017

ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ 

ಧರ್ಮತ್ತಡ್ಕ : ಧರ್ಮತ್ತಡ್ಕ ಹೈಯರ್ ಸೆಕೆಂಡರಿ ಶಾಲೆಯ  ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು 22-07-2017ರಂದು ಜರಗಿತು. ಸಂಘದ ಅಧ್ಯಕ್ಷ ಶ್ರೀ ಸುಂದರ ಶೆಟ್ಟಿ  ಅಧ್ಯಕ್ಷತೆ ವಹಿಸಿದರು. ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಪ್ರಾಸ್ತಾವಿಕ ಭಾಷಣ ಹಾಗು ಲೆಕ್ಕ ಪತ್ರ ಮಂಡಿಸಿದರು. ಶಾಲಾ ಮ್ಯಾನೇಜರ್ ಶ್ರೀ ಶಂಕರನಾರಾಯಣ ಭಟ್ ಶಾಲಾ ಅಭಿವೃದ್ಧಿ ಯೋಜನೆಯ ಕುರಿತು ಮಾತನಾಡಿದರು.ಶ್ವೇತಾ ಟೀಚರ್ ಗತ ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಾಲಿನ PTA ಅಧ್ಯಕ್ಷರಾಗಿ ಶಂಕರ ಕಾಮತ್, MPTA ಅಧ್ಯಕ್ಷೆಯಾಗಿ ಶ್ರೀಮತಿ ರೇವತಿ,PTA ಉಪಾಧ್ಯಕ್ಷರಾಗಿ  ಶ್ರೀ ಸುಂದರ ಶೆಟ್ಟಿ ,MPTA ಉಪಾಧ್ಯಕ್ಷೆಯಾಗಿ ಶೈಲಜಾ ಇವರು ಅವಿರೋಧವಾಗಿ ಆಯ್ಕೆಗೊಂಡರು. ಅಲ್ಲದೆ 17   ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಶಾಲಾ ಅಧ್ಯಾಪಕ ಸತೀಶ್ ಕುಮಾರ್ ಶೆಟ್ಟಿ  ಅವರು ಶಿಸ್ತು ಮತ್ತು ಶಾಲಾ ನಿಯಮಾವಳಿಗಳ ಬಗ್ಗೆ ರಕ್ಷಕರಿಗೆ ಮಾಹಿತಿ ನೀಡಿದರು. ಅಧ್ಯಾಪಕ ಶ್ರೀ ಗೋವಿಂದ  ಭಟ್ ಅವರು ವ್ಯಕ್ತಿ ಶುಚಿತ್ವ ಮತ್ತು ಆರೋಗ್ಯದ ಕುರಿತು ತರಗತಿ ನಡೆಸಿದರು.ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ತಮ್ಮ ಸಂಪೂರ್ಣ ಸಹಾಯ ಸಹಕಾರಗಳನ್ನು ನೀಡುತ್ತೇವೆಂದು ರಕ್ಷಕರು ಹೇಳಿದರು.  ಹಿರಿಯ ಅಧ್ಯಾಪಕಿ ಸುನೀತಾ ಕೆ ಪ್ರಾರ್ಥನೆ ಹಾಡಿ  ಸ್ವಾಗತಿಸಿದರು. ಅಧ್ಯಾಪಕಿ ಈಶ್ವರಿ ಡಿ ವಂದಿಸಿದರು. ಶ್ರೀಮತಿ ಉಮಾ ದೇವಿ ಕಾರ್ಯಕ್ರಮ ನಿರೂಪಿಸಿದರು.ಎಲ್ಲರಿಗೂ  ಲಘು ಉಪಹಾರವನ್ನು ನೀಡಲಾಯಿತು 







No comments: