Tuesday, August 15, 2017

71ನೇ ಸ್ವಾತಂತ್ರೋತ್ಸವ

ಧರ್ಮತ್ತಡ್ಕ: ಶ್ರೀ ದುರ್ಗಾಪರಮೇಶ್ವರೀ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ 71ನೇ ಸ್ವಾತಂತ್ರೋತ್ಸವವು ಶಾಲಾ ಪ್ರಾಂಶುಪಾಲರಾದ ಶ್ರೀಯುತ ಎನ್ ರಾಮಚಂದ್ರ ಭಟ್ ರವರು ಧ್ವಜಾರೋಹಣ ಗೈಯುವುದರೊಂದಿಗೆ ಆರಂಭವಾಯಿತು. ಶ್ರೀ ಎನ್ ಶಂಕರನಾರಾಯಣ ಭಟ್ ವ್ಯವಸ್ಥಾಪಕರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಶಂಕರ ಕಾಮತ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು. ಶಾಲಾ ಪ್ರಾಂಶುಪಾಲರ ಶುಭಹಾರೈಕೆಯೊಂದಿಗೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿoದ ಸ್ವಾತಂತ್ರಕೆ ಸಂಭದಿಸಿದ ವಿವಿಧ ಕಾರ್ಯಕ್ರಮವು ನಡೆಯಿತು. ವಿದ್ಯಾರ್ಥಿಗಳಾದ ಧೀಶ ಗಣ್ಯರನ್ನು ಸ್ವಾಗತಿಸಿ,ಬಿಂದು ವಂದಿಸಿದಳು. ಜೈನಭತ್ ಅಜ್ಮೀನ ಕಾರ್ಯಕ್ರಮ ನಿರೂಪಿಸಿದಳು. ಲಘು ಫಲಹಾರದೊಂದಿಗೆ ಕಾರ್ಯಕ್ರಮ ಸಂಪನ್ನಗೊಂಡಿತು. 










No comments: