Thursday, June 21, 2018

ಶ್ರೀ ದುರ್ಗಾ ಪರಮೇಶ್ವರೀ  ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಯೋಗ ದಿನಾಚರಣೆ :

ಶ್ರೀ ದುರ್ಗಾ ಪರಮೇಶ್ವರೀ  ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕದಲ್ಲಿ ಯೋಗ ದಿನವನ್ನು  ವಿಜಯ ಕರ್ನಾಟಕ ದಿನಪತ್ರಿಕೆಯ ವರದಿಗಾರರಾದ ಶ್ರೀಯುತ ಜಗದೀಶ್ ಪ್ರತಾಪ್ ನಗರ್ ಇವರ ಉಪಸ್ಥಿತಿಯಲ್ಲಿ ಜರಗಿತು. ಶಾಲಾ
ಪ್ರಾಂಶುಪಾಲರಾದ ಶ್ರೀ ಯನ್ ರಾಮಚಂದ್ರ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಗದೀಶ್ ಪ್ರತಾಪ್ ನಗರ್ ಇವರು ವಿದ್ಯಾರ್ಥಿಗಳಿಗೆ ಯೋಗದ ಮಹತ್ವವನ್ನು ತಿಳಿಸಿದರಲ್ಲದೆ ಯೋಗದ ವಿವಿಧ ಆಸನಗಳನ್ನು ಪ್ರ್ರಾತ್ಯಕ್ಷಿಕೆಯ ಮೂಲಕ ತಿಳಿಸಿದರು. ಶಾಲಾ ಅಧ್ಯಾಪಕ ಶ್ರೀಯುತ ಗೋವಿಂದ ಭಟ್ ಸ್ವಾಗತಿಸಿ, ಶ್ರೀಮತಿ ಸುನೀತಾ ಕೆ ವಂದಿಸಿದರು.
ಶ್ರೀಯುತ ಶಿವನಾರಾಯಣ ಭಟ್ ಇವರು ಕಾರ್ಯಕ್ರಮ ನಿರೂಪಿಸಿದರು.