Monday, July 08, 2019

ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ  2019-2020

ಧರ್ಮತ್ತಡ್ಕ : ಧರ್ಮತ್ತಡ್ಕ ಹೈಯರ್ ಸೆಕೆಂಡರಿ ಶಾಲೆಯ  ರಕ್ಷಕ ಶಿಕ್ಷಕ ಸಂಘದ ಮಹಾಸಭೆಯು 4-07-2019ರಂದು ಜರಗಿತು. ಸಂಘದ ಅಧ್ಯಕ್ಷ ಶ್ರೀ ಶ್ರೀ ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಿದರು.ಮುಖ್ಯೋಪಾಧ್ಯಾಯರಾದ  ಎನ್. ರಾಮಚಂದ್ರ ಭಟ್ ಪ್ರಾಸ್ತಾವಿಕ ಭಾಷಣ ಹಾಗೂ ಶಾಲಾ ಸೌಕರ್ಯಗಳ ಬಗ್ಗೆ ಮಾಹಿತಿ ನೀಡಿದರು.ಶಾಲಾ ಮ್ಯಾನೇಜರ್ ಶ್ರೀ ಯನ್ ಶಂಕರನಾರಾಯಣ ಭಟ್ ಶಾಲಾ ಅಭಿವೃದ್ಧಿ ಯೋಜನೆಯ ಕುರಿತು ಮಾತನಾಡಿದರು. ಶ್ರೀಮತಿ ಶ್ವೇತಾ ಟೀಚರ್ ಗತ ವರ್ಷದ ವಾರ್ಷಿಕ ವರದಿಯನ್ನು ಮಂಡಿಸಿದರು. ಈ ಸಾಲಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ಇಬ್ರಾಹಿಂ ಎ ,ಮಾತೃ ಸಂಘದ ಅಧ್ಯಕ್ಷೆಯಾಗಿ ಶ್ರೀಮತಿ ರೇವತಿ  ,ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾಗಿ  ಶ್ರೀ ಜಾನ್ ಡಿಸೋಜಾ ,ಮಾತೃ ಸಂಘದ ಉಪಾಧ್ಯಕ್ಷೆಯಾಗಿ ಶ್ರೀಮತಿ ಜಯಲಕ್ಷ್ಮಿ   ಇವರು ಆಯ್ಕೆಗೊಂಡರು.ಅಲ್ಲದೆ 18 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.ಹೈಯರ್ ಸೆಕೆಂಡರಿ ವಿಭಾಗದ ಪ್ರಭಾರ ಪ್ರಾಂಶುಪಾಲರಾದ ಶ್ರೀ ಸತೀಶ್ ಕುಮಾರ್ ಶೆಟ್ಟಿ  ಅವರು ಶುಭ ಹಾರೈಸಿದರು.ಶಾಲೆಯಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ತಮ್ಮ ಸಂಪೂರ್ಣ ಸಹಾಯ ಸಹಕಾರಗಳನ್ನು ನೀಡುತ್ತೇವೆಂದು ರಕ್ಷಕರು ಹೇಳಿದರು.ಶಾಲಾ ಅಧ್ಯಾಪಿಕೆಯರಾದ ಶ್ರೀಮತಿ ಪದ್ಮಶ್ರೀ,ದಿವ್ಯಶ್ರೀ ನವ್ಯಶ್ರೀ ಪ್ರಾರ್ಥಿಸಿದರು. ಶ್ರೀಮತಿ ಉಮಾ ದೇವಿ ಇವರು ಸ್ವಾಗತಿಸಿ, ಶ್ರೀ ರಾಮ ಕೃಷ್ಣ ಭಟ್ ವಂದಿಸಿದರು. ಶ್ರೀ ಗೋವಿಂಧ ಭಟ್ ಕಾರ್ಯಕ್ರಮ ನಿರೂಪಿಸಿದರು.ಎಲ್ಲರಿಗೂ  ಲಘು ಉಪಹಾರವನ್ನು ನೀಡಲಾಯಿತು. 








 

Sunday, July 07, 2019