ವಾಚನ ಸಪ್ತಾಹ ಆಚರಣೆಯ ಅಂಗವಾಗಿ ಸಂಸ್ಕೃತ ಸಂಘದ ವತಿಯಿಂದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾಲಯದ ಮುಖ್ಯ ಶಿಕ್ಷಕರಾದ ಶ್ರೀ ರಾಮಚಂದ್ರ ಭಟ್ ಅಧ್ಯಕ್ಷ ಸ್ಥಾನವನ್ನು ವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಹಿತವಚನಗಳನ್ನಿತ್ತರು. ಮುಖ್ಯ ಅಥಿತಿಗಳಾಗಿ ಪರಿಸರ ಸಂಘದ ಅಧ್ಯಾಪಕರಾದ ಶ್ರೀ ನರಸಿಂಹ ರಾಜ ಮಾಸ್ಟರ್ ಆಗಮಿಸಿ ಶುಭಕೋರಿದರು. ಸಂಸ್ಕೃತ ಅಧ್ಯಾಪಕರಾದ ಶ್ರೀ ಶಿವನಾರಾಯಣ ಭಟ್ ಪ್ರಾಸ್ತಾವಿಕ ಭಾಷಣ ಮಾಡಿದರು. ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಸಂಘದ ಸದಸ್ಯ ಆದರ್ಶ್ ಇ ಎಚ್ ಸ್ವಾಗತಿಸಿ, ಜತೆಕಾರ್ಯದರ್ಶಿ ಅಪೂರ್ವ ಎಡಕ್ಕಾನ ವಂದಿಸಿದರು. ಸಂಘದ ಕಾರ್ಯದರ್ಶಿ ನವನೀತ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದನು. ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರಗಿದವು.
Friday, June 30, 2017
Wednesday, June 21, 2017
ವಿಶ್ವ ಯೋಗ ದಿನ
ಧರ್ಮತ್ತಡ್ಕದಲ್ಲಿ ಜೂನ್ ೨೧ ೨೦೧೭ ರಂದು ಧರ್ಮತಡ್ಕ ಶ್ರೀ ದುರ್ಗಾಪರಮೇಶ್ವರಿ ಹೈಯರ್ ಸೆಕಂಡರಿ ಶಾಲೆಯಲ್ಲಿ ಕಾಸರಗೋಡು ಜಿಲ್ಲಾ ಮಟ್ಟದ ವಿಶ್ವ ಯೋಗ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು . ಕಾಸರಗೋಡು ಜಿಲ್ಲಾ ವಿದ್ಯಾಭ್ಯಾಸ ಉಪನಿರ್ದೇಶಕರಾದ ಶ್ರೀ ಇ . ಕೆ ಸುರೇಶ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶಾಲಾ ಮೆನೇಜರ್ ಶ್ರೀ ಯನ್ . ಶಂಕರನಾರಾಯಣ ಭಟ್ ಅಧ್ಯಕ್ಷತೆ ವಹಿಸಿದರು. ಶ್ರೀ ದಿನೇಶ್ ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ, ಡಾ। ಸೀತಾರತ್ನ , ಶ್ರೀ ಜಾನ್ ಡಿ ಸೋಜ , ದೈಹಿಕ ಶಿಕ್ಷಕರಾದ ಅಶೋಕನ್ ಶುಭಾಶಂಸನೆ ಗೈದರು.
ಯೋಗ ಗುರು ಕಾಸರಗೋಡು ಮೊಗ್ರಾಲ್ ಪುತ್ತೂರು ಶಾಲೆಯ ದೈಹಿಕ ಶಿಕ್ಷಕರಾದ ಶ್ರೀ ಗೋಪಾಲ ಕೃಷ್ಣ ಭಟ್ ನೂರಕ್ಕಿಂತ ಅಧಿಕ ವಿದ್ಯಾರ್ಥಿಗಳಿಗೆ ಯೋಗ ತರಬೇತಿ ನೀಡಿದರು
ಶ್ರೀ ಯನ್ ರಾಮಚಂದ್ರ ಭಟ್ ಪ್ರಾಂಶುಪಾಲರು ಸ್ವಾಗತಿಸಿ, ಧರ್ಮತಡ್ಕ ಯು.ಪಿ ಶಾಲಾ ಮುಖ್ಯೋಪಾಯರಾದ ಶ್ರೀ ಯನ್ ಮಹಾಲಿಂಗ ಭಟ್ ಧನ್ಯವಾದ ಸಮರ್ಪಿಸಿದರು, ಅಧ್ಯಾಪಕರಾದ ಸತೀಶ್ ಕುಮಾರ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು
Monday, June 19, 2017
Subscribe to:
Posts (Atom)

















