Sunday, November 14, 2021

 ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕ.

29_10_2021
ನಮ್ಮ ಪ್ರೌಢ ಶಾಲೆಯಲ್ಲಿ ಗಣಿತ ಶಿಕ್ಷಕಿಯಾಗಿದ್ದ ಶ್ರೀಮತಿ ಪ್ರಮೀಳಾ ಟೀಚರ್ ಅವರ ಬೀಳ್ಕೊಡುಗೆ ಕಾರ್ಯಕ್ರಮ ಶಾಲಾ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್ ವಹಿಸಿದರು.
ಪ್ರಸ್ತುತ ಕಾರ್ಯಕ್ರಮದಲ್ಲಿ ಉನ್ನತ ಪ್ರೌಢಶಾಲೆಯ ಪ್ರಾಂಶುಪಾಲರಾದ ಶ್ರೀ ಎನ್ ರಾಮಚಂದ್ರ ಭಟ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್
ಧರ್ಮತ್ತಡ್ಕ ಎಯುಪಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಎನ್ ಮಹಾಲಿಂಗ ಭಟ್, ಧರ್ಮತ್ತಡ್ಕ ಎಯುಪಿ ಶಾಲೆಯ ವ್ಯವಸ್ಥಾಪಕಿ ಶ್ರೀಮತಿ ವಿಜಯಶ್ರೀ, ಅಧ್ಯಾಪಕ ಶ್ರೀ ರಾಮಕೃಷ್ಣ ಭಟ್ ಹಾಗೂ ಶ್ರೀಮತಿ ಉಷಾ ಕೆ ಆರ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ನಿವೃತ್ತ ಅಧ್ಯಾಪಿಕೆಯಾದ ಶ್ರೀಮತಿ ಪ್ರಮೀಳಾ ಟೀಚರ್ ಅವರಿಗೆ ಸ್ಮರಣಿಕೆ ಫಲ ಪುಷ್ಪಗಳನ್ನು ನೀಡಿ ಗೌರವಿಸಲಾಯಿತು.
ಸುಸಂದರ್ಭದಲ್ಲಿ ಧರ್ಮತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ವಿದ್ಯಾ ಸಂಸ್ಥೆಯ ಅಧ್ಯಾಪಕ ವೃಂದ ಸೇರಿದ್ದರು.
ಕಾರ್ಯಕ್ರಮದ ಪ್ರಾರ್ಥನೆಯಲ್ಲಿ ಅಧ್ಯಾಪಕರಾದ ರಾಜಕುಮಾರ್ ಕೆ, ಪ್ರದೀಪ ಕೆ ಶಿವಪ್ರಸಾದ ಸಿ, ಪ್ರಶಾಂತ ಹೊಳ್ಳ ಎನ್, ಶಶಿಧರ ಕೆ, ಸೂರ್ಯನಾರಾಯಣ ಭಟ್ ಪಿ ಸಹಕರಿಸಿದರು.
ಶ್ರೀಮತಿ ಶಿಲ್ಪ ಬಿ ಎನ್ ಸ್ವಾಗತಿಸಿ, ಶಿವಪ್ರಸಾದ್ ಸಿ ಹಾಗೂ ಪ್ರಶಾಂತ ಹೊಳ್ಳ ಎನ್ ನಿರೂಪಣೆಗೈದರು, ಶ್ರೀಮತಿ ಉಷಾ ಕೆ ಆರ್ ವಂದಿಸಿದರು.










ಅಭಿನಂದನಾ ಕಾರ್ಯಕ್ರಮ




ಶ್ರೀ ದುರ್ಗಾ ಪರಮೇಶ್ವರಿ ಪ್ರೌಢ ಶಾಲೆ ಧರ್ಮತ್ತಡ್ಕ.
2020-21 ನೇ ಸಾಲಿನ ಶೈಕ್ಷಣಿಕ ವರ್ಷದ ಎಸ್ ಎಸ್ ಎಲ್ ಸಿ ಹಾಗೂ ಪ್ಲಸ್ ಟು ಪರೀಕ್ಷೆ ಯಲ್ಲಿ ಉನ್ನತ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮ ಇಂದು ಶಾಲೆಯಲ್ಲಿ ಜರಗಿತು.
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಎಲ್ಲಾ ವಿಷಯಗಳಲ್ಲಿ A+ ಪಡೆದ 31 ವಿದ್ಯಾರ್ಥಿಗಳನ್ನು ಹಾಗೂ ಒಂಭತ್ತು ವಿಷಯಗಳಲ್ಲಿ A+ ಪಡೆದ 18 ವಿದ್ಯಾರ್ಥಿಗಳನ್ನು ಮತ್ತು ಹೈಯರ್ ಸೆಕೆಂಡರಿ ಶಾಲೆಯ ವಾಣಿಜ್ಯ ವಿಭಾಗ , ಹ್ಯುಮಾನಿಟೀಸ್ ವಿಭಾಗದಲ್ಲಿ ಉನ್ನತ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಈ ಸುಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಕರಾದ ಶ್ರೀ ಅಶೋಕನ್ ಅವರ ಹೆತ್ತವರಾದ ಶ್ರೀಮತಿ ನಾರಾಯಣಿ ಅಮ್ಮ ಹಾಗೂ ಶ್ರೀ ಕಣ್ಣನ್ ಅವರ ಸ್ಮರಣಾರ್ಥ ನಗದು ಹಾಗೂ ಸ್ಮರಣಿಕೆಯನ್ನು ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ನೀಡಲಾಯಿತು.
ಇದರೊಂದಿಗೆ ಮೇಪೋಡು ಶ್ರೀ ಸುಬ್ರಾಯ ದತ್ತಿನಿಧಿಯನ್ನು ಕನ್ನಡ ಮಾಧ್ಯಮದಲ್ಲಿ ಉನ್ನತ ಸಾಧನೆಗೈದ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.
ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು PTA ಅಧ್ಯಕ್ಷರಾದ ಶ್ರೀ ಇಬ್ರಾಹಿಂ ಎನ್ ವಹಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕವಾಗಿ ಮಾತಾಡಿದರು.
ಇದರೊಂದಿಗೆ ಶಾಲಾ ವ್ಯವಸ್ಥಾಪಕ ಶ್ರೀ ಎನ್ ಶಂಕರನಾರಾಯಣ ಭಟ್, ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರಾದ ಎನ್ ರಾಮಚಂದ್ರ ಭಟ್, ಯುಪಿ ಶಾಲೆಯ ಮುಖ್ಯೋಪಾಧ್ಯಾಯ ಶ್ರೀ ಎನ್ ಮಹಾಲಿಂಗ ಭಟ್, ಯುಪಿ ಶಾಲೆಯ ವ್ಯವಸ್ಥಾಪಕರಾದ ಶ್ರೀಮತಿ ವಿಜಯ ಶ್ರೀ, ಹೈಯರ್ ಸೆಕೆಂಡರಿ ಶಿಕ್ಷಕರಾದ ಸತೀಶ್ ಶೆಟ್ಟಿ ಒಡ್ಡಂಬೆಟ್ಟು, ಪ್ರೌಢ ಶಾಲೆಯ ಶಿಕ್ಷಕರಾದ ಶಶಿಕುಮಾರ್ ಪಿ, PTA ಉಪಾಧ್ಯಕ್ಷ ಶ್ರೀ ಜೋನ್ ಡಿ ಸೋಜ, MPTA ಶ್ರೀಮತಿ ಜಲಜಾಕ್ಷಿ ಶುಭಾಶಂಸನೆಗೈದರು.
ಕಾರ್ಯಕ್ರಮದಲ್ಲಿ ಶ್ರೀಮತಿ ಈಶ್ವರಿ ಡಿ ಪ್ರಾರ್ಥಿಸಿ, ಶ್ರೀಮತಿ ಉಮಾದೇವಿ ಎಂ ಎಲ್ ಸ್ವಾಗತಿಸಿ, ಶ್ರೀಮತಿ ಶ್ವೇತ ಕುಮಾರಿ ಎಂ ವಂದಿಸಿದರು, ಶಿವಪ್ರಸಾದ್ ಸಿ ಹಾಗೂ ಪ್ರಶಾಂತ ಹೊಳ್ಳ ಎನ್ ನಿರೂಪಣೆಯಲ್ಲಿ ಸಹಕರಿಸಿದರು.













.

ಮಹಾತ್ಮ ಗಾಂಧೀಜಿ

 ಮಹಾತ್ಮ ಗಾಂಧೀಜಿ ಅವರ 152 ನೇ ಜನ್ಮದಿನವನ್ನು ಸರಳವಾಗಿ ಆಚರಿಸಲಾಯಿತು.

ಪರಿಸರದ ಸ್ವಚ್ಚತೆಯನ್ನು ಅಧ್ಯಾಪಕರು ನಿರ್ವಹಿಸಿದರು.







Monday, July 19, 2021

 2020_21 ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನ ಕಾರ್ಯಕ್ರಮ ಹಾಗೂ ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿಗಳಿಗೆ ಮುಂದಿನ ಕಲಿಕೆಯ ಕುರಿತಾಗಿ ವೆಬಿನಾರ್ 17.07.2021 ಸಂಜೆ 7.30 ಗಂಟೆಗೆ ಜರಗಿತು.







Congratulations to all SSLC Students

 Congratulations to all students for historic achievement in the SSLC Exam ,March 2021,during this covid pandemic.Heartful of thanks to everyone behind this success, Especially Parents,HM and all the staff.180 out of 180 Students Eligible for Higher studies.31 students got full A+,18 students just missed in one subject and got 9 A+.All the best for future studies.




Tuesday, February 23, 2021

ಆರೋಗ್ಯ ಇಲಾಖೆಯ ತರಗತಿ

 Covid ಸಂದರ್ಭದಲ್ಲಿ SSLC ಪರೀಕ್ಷೆಯನ್ನು ಮುಂಜಾಗ್ರತಾ ಕ್ರಮಗಳೊಂದಿಗೆ ಕೈಗೊಳ್ಳಬೇಕೆಂಬ ತರಗತಿಯನ್ನು ಆರೋಗ್ಯ ಇಲಾಖೆಯ ಶ್ರೀಮತಿ ಅಜಿತ(Adolescent Health Councillor - CHC Badiyadka) ಮತ್ತು ರೇಖಾ(School JPHN Puthige Panchayath) ನಡೆಸಿಕೊಟ್ಟರು