Wednesday, November 17, 2021

 ಒಂಭತ್ತನೇ ತರಗತಿಯ ನವಾಗತ ವಿದ್ಯಾರ್ಥಿಗಳ ಪ್ರವೇಶೋತ್ಸವ ಇಂದು ಶಾಲಾ ಸಭಾಂಗಣದಲ್ಲಿ ಜರಗಿತು.

ಶಾಲೆಯ ವ್ಯವಸ್ಥಾಪಕರಾದ ಶ್ರೀ ಶಂಕರನಾರಾಯಣ ಭಟ್ ವಿದ್ಯಾರ್ಥಿಗಳನ್ನು ಔಪಚಾರಿಕವಾಗಿ ಸ್ವಾಗತಿಸಿ ಮಾತನಾಡಿದರು.

ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್  ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಶ್ರೀ ಶಶಿಕುಮಾರ್ ಪಿ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ವಿವರಿಸಿದರು.

ತರಗತಿ ಅಧ್ಯಾಪಿಕೆಯರಾದ ಶ್ರೀಮತಿ ಈಶ್ವರಿ ಡಿ, ಶ್ರೀಮತಿ ಶ್ವೇತ ಕುಮಾರಿ ಎಂ, ಶ್ರೀಮತಿ ಉಷಾಪದ್ಮ ಜಿ, ಶ್ರೀಮತಿ ತುಳಸಿ ಕೆ ಉಪಸ್ಥಿತರಿದ್ದರು.

ಶ್ರೀ ಪ್ರಶಾಂತ ಹೊಳ್ಳ ಎಂ ಕಾರ್ಯಕ್ರಮ ನಿರೂಪಿಸಿದರು.




Sunday, November 14, 2021


 

 NAS 2021 @ SDPHSS DHARMATHADKA teaching faculties







 SDPHSS DHARMATHADHA

25/10/2021
ಶಾಲಾ ಪುನರಾರಂಭದ ಅಂಗವಾಗಿ, ರಕ್ಷಕ- ಶಿಕ್ಷಕ ಮಹಾಸಭೆಯನ್ನು ದಿನಾಂಕ 25/10/2021ರಂದು ಸೇರಲಾಯಿತು.
ರಕ್ಷಕ- ಶಿಕ್ಷಕ ಸಮಿತಿಯ ಮಹಸಭೆಯ ಅಧ್ಯಕ್ಷತೆಯನ್ನು ಸಮಿತಿಯ ಅಧ್ಯಕ್ಷ ಶ್ರೀ ಇಬ್ರಾಹಿಂ ಎನ್ ವಹಿಸಿದರು.
ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಶಾಲೆಯ ವ್ಯವಸ್ಥಾಪ ಶ್ರೀ ಎನ್ ಶಂಕರನಾರಾಯಣ ಭಟ್ ಹಾಗೂ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಕಾರ್ಯಕ್ರಮಕ್ಕೆ ಶುಭಾಶಂಸನೆಗೈದರು.
ಮಾತೃ ರಕ್ಷಕ ಮಂಡಳಿಯ ಅಧ್ಯಕ್ಷೆ ಶ್ರೀಮತಿ ಜಲಜಾಕ್ಷಿ ಉಪಸ್ಥಿತರಿದ್ದರು.
ಪುತ್ತಿಗೆ ಪಂಚಾಯತ್ ಆರೋಗ್ಯ ಇಲಾಖೆಯ JPHN ಆಗಿರುವ ಲೆಬಿತ ಆರೋಗ್ಯ ಸಂರಕ್ಷಣೆ ಬಗ್ಗೆ ಮಾಹಿತಿ ಒದಗಿಸಿದರು.
ಸಭೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಈಶ್ವರಿ ಡಿ, ಶ್ರೀಮತಿ ಶ್ವೇತ ಕುಮಾರಿ ಎಂ ಹಾಗೂ ಸೌಮ್ಯ ಎಂ ಪ್ರಾರ್ಥನೆ ಹಾಡಿದರು.
ಶ್ರೀ ರಾಮಕೃಷ್ಣ ಭಟ್ ಸ್ವಾಗತಿಸಿ, ಶ್ರೀ ಉಣ್ಣಿಕೃಷ್ಣ ಧನ್ಯವಾದ ಸಮರ್ಪಿಸಿದರು.
ಶ್ರೀ ಶಿವಪ್ರಸಾದ್ ಸಿ ಹಾಗೂ ಶ್ರೀ ಪ್ರಶಾಂತ ಹೊಳ್ಳ ಎನ್ ನಿರೂಪಣೆಯಲ್ಲಿ ಸಹಕರಿಸಿದರು.







ಲೇಖಕಿ ಶ್ರೀಮತಿ ಪ್ರಸನ್ನ ವಿ ಚೆಕ್ಕೆಮನೆ ಇವರು  ತಮ್ಮ ನೀಲಾಂಬರಿ(ಕಥಾಸಂಕಲನ

ಹಾಗೂ ತುಳಸೀಹಾರ(ಕಾದಂಬರಿ) ಎಂಬೀ ಕೃತಿಗಳನ್ನು ನಮ್ಮ ಶಾಲೆಯ ಗ್ರಂಥಾಲಯಕ್ಕೆ ಗೌರವಪೂರ್ವಕವಾಗಿ ನೀಡಿದರು


..

ಧನ್ಯವಾದಗಳು






ನವಾಗತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

 SDPHSS DHARMATHADKA

10/11/2021
ಎಂಟು ಮತ್ತು ಒಂಭತ್ತನೇ ತರಗತಿಯ ವಿದ್ಯಾರ್ಥಿಗಳ ರಕ್ಷಕ ಶಿಕ್ಷಕ ಸಭೆ ಇಂದು ಶಾಲಾ ಸಭಾಂಗಣದಲ್ಲಿ ಜರಗಿತು.
ಶಾಲೆಯ ವ್ಯವಸ್ಥಾಪಕರಾದ ಶ್ರೀ ಎನ್ ಶಂಕರನಾರಾಯಣ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಮುಖ್ಯೋಪಾಧ್ಯಾಯ ಶ್ರೀ ಇ ಎಚ್ ಗೋವಿಂದ ಭಟ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲ ಶ್ರೀ ಎನ್ ರಾಮಚಂದ್ರ ಭಟ್ ಕಾರ್ಯಕ್ರಮಕ್ಕೆ ಶುಭಾಶಂಸನೆ ಹೇಳಿದರು.
ಶಿಕ್ಷಕರಾದ ಶ್ರೀ ಕೆ ರಾಮಕೃಷ್ಣ ಭಟ್, ಉಷಾ ಕೆ ಆರ್ ಉಪಸ್ಥಿತರಿದ್ದರು.
ಮಾತೃ ರಕ್ಷಕ ಮಂಡಳಿಯ ಕಾರ್ಯಕಾರಿ ಸಮಿತಿ ಸದಸ್ಯೆ ವಸಂತಿ ಎಂ ಉಪಸ್ಥಿತರಿದ್ದರು.
ಪ್ರಸ್ತುತ ಸಭೆಯಲ್ಲಿ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ವಿದ್ಯಾರ್ಥಿಗಳ ಕಲಿಕೆಯ ಕುರಿತಾಗಿ ಹಲವಾರು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಶ್ರೀಮತಿ ಈಶ್ವರಿ ಡಿ, ಶ್ರೀಮತಿ ಶ್ವೇತ ಕುಮಾರಿ ಎಂ ಹಾಗೂ ಶ್ರೀಮತಿ ಸೌಮ್ಯ ಎಂ ಪ್ರಾರ್ಥಿಸಿ
ಶ್ರೀಮತಿ ವಿದ್ಯಾಸರಸ್ವತಿ ಸ್ವಾಗತಿಸಿ, ಶ್ರೀ ಶಶಿಧರ ಕೆ ಧನ್ಯವಾದ ಸಮರ್ಪಿಸಿದರು.
ಶ್ರೀ ಶಿವಪ್ರಸಾದ್ ಸಿ ಹಾಗೂ ಶ್ರೀ ಪ್ರಶಾಂತ ಹೊಳ್ಳ ಎನ್ ನಿರ್ವಹಿಸಿದರು.